ಹಾಡೋನಹಳ್ಳಿಯಲ್ಲಿ ಹೆಚ್ಚಿದ ಕುರಿ-ಮೇಕೆ ಕಳ್ಳರ ಹಾವಳಿ: ರಾತ್ರೋರಾತ್ರಿ ಎರಡು ಮೇಕೆ ಹೋತ ಕಳವು: ಸಂಕಷ್ಟದಲ್ಲಿ ರೈತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿ ಕುರಿ-ಮೇಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಸಾವಿರಾರು ರೂ. ಬೆಲೆ ಬಾಳುವ ಕುರಿ-ಮೇಕೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.

ಕಳೆದ ರಾತ್ರಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡ ಸಮೀಪದ‌ ಮನೆಯೊಂದರ ಕೊಟ್ಟಿಗೆಯಲ್ಲಿ ಇರಿಸಿದ್ದ ಎರಡು ಮೇಕೆ ಹೋತಗಳು ಕಳ್ಳತನವಾಗಿದೆ..

ರೈತ ವೇಣುಗೋಪಾಲ್ ಎಂಬುವವರು ಕಳೆದ ಮೂರು ತಿಂಗಳಿಂದೆ ಸುಮಾರು 17.500 ರೂ. ಕೊಟ್ಟು ಎರಡು ಮೇಕೆ ಹೋತಗಳನ್ನು ತಂದಿದ್ದರು. ಅವುಗಳ ಈಗಿನ ಬೆಲೆ ಸುಮಾರು 40ಸಾವಿರ ರೂ. ಗೆ ಮಾರಾಟ ಆಗುತ್ತಿತ್ತು. ಇದೀಗ ಎರಡು ಮೇಕೆ ಹೋತಗಳು ಕಳ್ಳತನವಾಗಿವೆ. ಇದರಿಂದ ನಮಗೆ ತುಂಬಾ ನಷ್ಟ ಉಂಟಾಗಿದೆ. ಇತ್ತೀಚೆಗೆ ಹಾಡೋನಹಳ್ಳಿಯಲ್ಲಿ ಕುರಿ‌, ಮೇಕೆ ಕಳ್ಳತನ ಹೆಚ್ಚಾಗಿದೆ. ಪೊಲೀಸರು ಕಳ್ಳರ ಹೆಡೆಮುರಿ ಕಟ್ಟಿ ರೈತರ ನೆಮ್ಮದಿ ಬದುಕಿಗೆ ಅನುವು ಮಾಡಿಕೊಡಬೇಕು ಎಂದು ರೈತ ವೇಣುಗೋಪಾಲ್ ಹೇಳಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

2 minutes ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

10 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

11 hours ago

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

20 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

22 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

1 day ago