ಹಾಡೋನಹಳ್ಳಿಯಲ್ಲಿ ಹೆಚ್ಚಿದ ಕುರಿ-ಮೇಕೆ ಕಳ್ಳರ ಹಾವಳಿ: ರಾತ್ರೋರಾತ್ರಿ ಎರಡು ಮೇಕೆ ಹೋತ ಕಳವು: ಸಂಕಷ್ಟದಲ್ಲಿ ರೈತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿ ಕುರಿ-ಮೇಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಸಾವಿರಾರು ರೂ. ಬೆಲೆ ಬಾಳುವ ಕುರಿ-ಮೇಕೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.

ಕಳೆದ ರಾತ್ರಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡ ಸಮೀಪದ‌ ಮನೆಯೊಂದರ ಕೊಟ್ಟಿಗೆಯಲ್ಲಿ ಇರಿಸಿದ್ದ ಎರಡು ಮೇಕೆ ಹೋತಗಳು ಕಳ್ಳತನವಾಗಿದೆ..

ರೈತ ವೇಣುಗೋಪಾಲ್ ಎಂಬುವವರು ಕಳೆದ ಮೂರು ತಿಂಗಳಿಂದೆ ಸುಮಾರು 17.500 ರೂ. ಕೊಟ್ಟು ಎರಡು ಮೇಕೆ ಹೋತಗಳನ್ನು ತಂದಿದ್ದರು. ಅವುಗಳ ಈಗಿನ ಬೆಲೆ ಸುಮಾರು 40ಸಾವಿರ ರೂ. ಗೆ ಮಾರಾಟ ಆಗುತ್ತಿತ್ತು. ಇದೀಗ ಎರಡು ಮೇಕೆ ಹೋತಗಳು ಕಳ್ಳತನವಾಗಿವೆ. ಇದರಿಂದ ನಮಗೆ ತುಂಬಾ ನಷ್ಟ ಉಂಟಾಗಿದೆ. ಇತ್ತೀಚೆಗೆ ಹಾಡೋನಹಳ್ಳಿಯಲ್ಲಿ ಕುರಿ‌, ಮೇಕೆ ಕಳ್ಳತನ ಹೆಚ್ಚಾಗಿದೆ. ಪೊಲೀಸರು ಕಳ್ಳರ ಹೆಡೆಮುರಿ ಕಟ್ಟಿ ರೈತರ ನೆಮ್ಮದಿ ಬದುಕಿಗೆ ಅನುವು ಮಾಡಿಕೊಡಬೇಕು ಎಂದು ರೈತ ವೇಣುಗೋಪಾಲ್ ಹೇಳಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

9 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

15 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

21 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

22 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago