ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ಗ್ರಾಮಸ್ಥರ ವಿರೋಧ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.

ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.

ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.

ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

43 minutes ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

3 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

3 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

4 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

5 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

8 hours ago