ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.
ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.
ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…