ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ಗ್ರಾಮಸ್ಥರ ವಿರೋಧ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.

ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.

ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.

ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago