ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.
ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.
ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…