ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.
ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.
ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…