ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.
ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.
ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…