ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ಗ್ರಾಮಸ್ಥರ ವಿರೋಧ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ ಗ್ರಾಮಸ್ಥರು ಹಲವಾರು ಬಾರಿ ಹೋರಾಟಗಳನ್ನು ಮಾಡುತ್ತ ಬಂದಿದ್ದರು ಸಹ ಈಗ ಮತ್ತೊಮ್ಮೆ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸುತ್ತಿರುವುದು ಖಂಡನೀಯ.

ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿ ದಿನ ರಾಜ್ಯದ ವಿವಿಧೆಡೆಗಳಿಂದ ನೂರು ಜನ ಭಕ್ತಾದಿಗಳು ಬಂದು ಹೋಗುವ, ಜಿಲ್ಲೆಯ ರೈತರು, ರೈತ ಮಹಿಳೆಯರು ತೆರಬೇತಿಗಾಗಿ ಬರುವ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಾಲೆ, ಗ್ರಾಮದ ವಾಸದ ಮನೆಗಳು ಇರುವ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮವಾಗಿದೆ.

ಈಗಾಗಲೇ ಹಾಡೋನಹಳ್ಳಿಗೆ ಸಮೀಪದಲ್ಲೇ ತೂಬಗೆರೆಯಲ್ಲಿ ಮದ್ಯದ ಅಂಗಡಿ ಇದ್ದು ಇದರಿಂದಲೇ ಸಂಜೆ ವೇಳೆ ಸಾಕಷ್ಟು ಜನ ಕುಡುಕರ ಹಾವಳಿ ಮಿತಿ ಮೀರಿದೆ ಎಂದು ದೂರಿರುವ ಗ್ರಾಮದ ಮುಖಂಡ ಎಂ.ಮುನೇಗೌಡ, ಮದ್ಯದ ಅಂಗಡಿ ತೆರೆಯದಂತೆ ಈ ಹಿಂದೆ ಸ್ತ್ರೀಶಕ್ತಿ ಸಂಘದ ಮಹಿಳೆಯರು, ಗ್ರಾಮಸ್ಥರು ನೀಡಿದ್ದ ಮನವಿಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿ ತೆರೆಯದಂತೆ ತಡೆದಿದ್ದರು.

ಈಗ ಮತ್ತೆ ಎಂಎಸ್ಐಎಲ್ ವತಿಯಿಂದ ಮದ್ಯದ ಅಂಗಡಿ ತೆರೆಯಲು ಸಿದ್ದತೆ ನಡೆಸಿರುವುದು ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯು ಹೆಚ್ಚಾಗಲಿದೆ. ಗ್ರಾಮದಲ್ಲಿ ಸತತ 10 ವರ್ಷಗಳಿಂದ ವಿರೋಧವಿದ್ದರೂ ಸಹ ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ಪ್ರಸ್ತಾವನೆ ಕೈಗೊಳ್ಳುವುದಕ್ಕೆ ಗ್ರಾಮದ ಗ್ರಾಮಸ್ಥರ ವಿರೋಧ ಇದೆ. ಗ್ರಾಮವನ್ನು ಮದ್ಯ ಮುಕ್ತ ಹಾಗೂ ಮಹಿಳೆಯರ ಸುರಕ್ಷತೆ, ಘಾಟಿಯಲ್ಲಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾಧಿಗಳ ಸುರಕ್ಷತಾ ದೃಷ್ಟಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರಯಲು ಯಾರಿಗೂ ಸಹ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 hour ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago