ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಹೆಚ್.ಎ ನಾಗರಾಜು ಮತ್ತು ರಮ್ಯಾ ಸಿ.ಹೆಚ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಹನುಮಂತರಾಯಪ್ಪ ಮತ್ತು ಗಂಗರತ್ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದರು.
ಹದಿನೈದು ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನದ ಜೆಡಿಎಸ್ ಅಭ್ಯರ್ಥಿ ಹೆಚ್.ಎ ನಾಗರಾಜ್ ಅವರಿಗೆ 11 ಮಂದಿ ಸದಸ್ಯರು ಮತ ನೀಡಿ, 4 ಜನ ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಪರವಾಗಿ ಮತ ಚಲಾವಣೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ರಮ್ಯಾ ಸಿ.ಹೆಚ್ ಅವರಿಗೆ 9 ಮಂದಿ ಬೆಂಬಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಗಂಗರತ್ನಮ್ಮ ಅವರಿಗೆ 6 ಮಂದಿ ಮತ ನೀಡಿದ್ದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜು ಮತ್ತು ಉಪಾಧ್ಯಕ್ಷರಾದ ರಮ್ಯಾ ಅವರಿಗೆ ಗಣ್ಯರಿಂದ ಅಭಿನಂದನೆಗಳು ಸಲ್ಲಿಸಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ, ಚುನಾವಣಾ ಅಧಿಕಾರಿ ಗಿರಿಜಾಂಬ ಎನ್, ದೇವನಹಳ್ಳಿ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾದ ದೇವರಾಜ್, ಮಂಜುನಾಥ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಗೌರೀಶ್ ರಾಮಣ್ಣ, ಮುದ್ದುಕೃಷ್ಣಪ್ಪ, ಪುರುಷೋತ್ತಮ್, ಉದಯ ಆರಾಧ್ಯ ಮತ್ತಿತರರು ಭಾಗವಹಿಸಿದ್ದರು
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…