ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಹೆಚ್.ಎ ನಾಗರಾಜು ಮತ್ತು ರಮ್ಯಾ ಸಿ.ಹೆಚ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಹನುಮಂತರಾಯಪ್ಪ ಮತ್ತು ಗಂಗರತ್ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದರು.
ಹದಿನೈದು ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನದ ಜೆಡಿಎಸ್ ಅಭ್ಯರ್ಥಿ ಹೆಚ್.ಎ ನಾಗರಾಜ್ ಅವರಿಗೆ 11 ಮಂದಿ ಸದಸ್ಯರು ಮತ ನೀಡಿ, 4 ಜನ ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಪರವಾಗಿ ಮತ ಚಲಾವಣೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ರಮ್ಯಾ ಸಿ.ಹೆಚ್ ಅವರಿಗೆ 9 ಮಂದಿ ಬೆಂಬಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಗಂಗರತ್ನಮ್ಮ ಅವರಿಗೆ 6 ಮಂದಿ ಮತ ನೀಡಿದ್ದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜು ಮತ್ತು ಉಪಾಧ್ಯಕ್ಷರಾದ ರಮ್ಯಾ ಅವರಿಗೆ ಗಣ್ಯರಿಂದ ಅಭಿನಂದನೆಗಳು ಸಲ್ಲಿಸಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ, ಚುನಾವಣಾ ಅಧಿಕಾರಿ ಗಿರಿಜಾಂಬ ಎನ್, ದೇವನಹಳ್ಳಿ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾದ ದೇವರಾಜ್, ಮಂಜುನಾಥ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಗೌರೀಶ್ ರಾಮಣ್ಣ, ಮುದ್ದುಕೃಷ್ಣಪ್ಪ, ಪುರುಷೋತ್ತಮ್, ಉದಯ ಆರಾಧ್ಯ ಮತ್ತಿತರರು ಭಾಗವಹಿಸಿದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…