ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಅಧ್ಯಕ್ಷರಾಗಿ ಹೆಚ್.ಎ ನಾಗರಾಜು, ಉಪಾಧ್ಯಕ್ಷೆಯಾಗಿ ರಮ್ಯಾ ಸಿ.ಹೆಚ್ ಆಯ್ಕೆ: ಗಣ್ಯರ ಅಭಿನಂದನೆ

 

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಹೆಚ್.ಎ ನಾಗರಾಜು ಮತ್ತು ರಮ್ಯಾ ಸಿ.ಹೆಚ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಹನುಮಂತರಾಯಪ್ಪ ಮತ್ತು ಗಂಗರತ್ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದರು.

ಹದಿನೈದು ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನದ ಜೆಡಿಎಸ್ ಅಭ್ಯರ್ಥಿ ಹೆಚ್.ಎ ನಾಗರಾಜ್ ಅವರಿಗೆ 11 ಮಂದಿ ಸದಸ್ಯರು ಮತ ನೀಡಿ, 4 ಜನ ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಪರವಾಗಿ ಮತ ಚಲಾವಣೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ರಮ್ಯಾ ಸಿ.ಹೆಚ್ ಅವರಿಗೆ 9 ಮಂದಿ ಬೆಂಬಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಗಂಗರತ್ನಮ್ಮ ಅವರಿಗೆ 6 ಮಂದಿ ಮತ ನೀಡಿದ್ದರು.

ಈ ಹಿನ್ನೆಲೆ ಚುನಾವಣೆಯಲ್ಲಿ ಹೆಚ್ಚು ಮತ ಪಡೆದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎನ್.ಗಿರಿಜಾಂಬ ಪ್ರಕಟಿಸಿದ ನಂತರ ಜೆಡಿಎಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು.

ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜು ಮತ್ತು ಉಪಾಧ್ಯಕ್ಷರಾದ ರಮ್ಯಾ ಅವರಿಗೆ ಗಣ್ಯರಿಂದ ಅಭಿನಂದನೆಗಳು ಸಲ್ಲಿಸಿದರು.

ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ, ಚುನಾವಣಾ ಅಧಿಕಾರಿ ಗಿರಿಜಾಂಬ ಎನ್, ದೇವನಹಳ್ಳಿ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾದ ದೇವರಾಜ್, ಮಂಜುನಾಥ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಗೌರೀಶ್ ರಾಮಣ್ಣ, ಮುದ್ದುಕೃಷ್ಣಪ್ಪ, ಪುರುಷೋತ್ತಮ್, ಉದಯ ಆರಾಧ್ಯ ಮತ್ತಿತರರು ಭಾಗವಹಿಸಿದ್ದರು

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

3 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

15 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

16 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

18 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

21 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

23 hours ago