
ದೊಡ್ಡಬಳ್ಳಾಪುರ ತಾಲೂಕಿನ
ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿ ಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ರಾಮನಾಯ್ಕ್, ಉಪಾಧ್ಯಕ್ಷರಾಗಿ ಗಂಗಲಕ್ಷ್ಮಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮ ನಾಯ್ಕ್ ಮಾತನಾಡಿ, ಪಹಣಿ ಗಳ ಆಧಾರದ ಮೇಲೆ ಶೇ.3 ರಷ್ಟು ಬಡ್ಡಿದರದಲ್ಲಿ ರೈತರಿಗೆ ಕೃಷಿ ಸಾಲ ರಸಗೊಬ್ಬರ ಮತ್ತು ಇತರೆ ಅಗತ್ಯ ಸೇವೆಗಳಿಗೆ ಬದ್ದರಾಗಿರುತ್ತೇವೆ ಹಾಗು ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಲಾಗುವುದು, ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ದಿಗಾಗಿ ಸದಾ ಶ್ರಮಿಸುತ್ತೆವೆ ಎಂದರು.
ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಮನಾಯ್ಕ್ ಹಾಗೂ ಗಂಗಲಕ್ಷ್ಮಮ್ಮ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜ್, ತೂಬಗೆರೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ರಂಗಪ್ಪ, ಗಂಗಸಂದ್ರ ಶ್ರೀಧರ್, ಚಿದಾನಂದ, ಮೇಳೇಕೋಟೆ ಆಂಜಿನಪ್ಪ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀಧರ್. ಎಂ ಮುನೇಗೌಡ, ನಂಜೇಗೌಡ, ಸದಸ್ಯರುಗಳಾದ ಮುದ್ದಣ್ಣ, ಪಿಳ್ಳಪ್ಪ, ವೆಂಕಟೇಶ, ಅನುಸೂಯಮ್ಮ, ಹನುಮಂತರಾಯಪ್ಪ, ಮುನಿರಾಜ್ ಹಾಗು ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.