ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ

ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿ ಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ರಾಮನಾಯ್ಕ್, ಉಪಾಧ್ಯಕ್ಷರಾಗಿ ಗಂಗಲಕ್ಷ್ಮಮ್ಮ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ  ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮ ನಾಯ್ಕ್ ಮಾತನಾಡಿ, ಪಹಣಿ ಗಳ ಆಧಾರದ ಮೇಲೆ ಶೇ.3 ರಷ್ಟು ಬಡ್ಡಿದರದಲ್ಲಿ ರೈತರಿಗೆ ಕೃಷಿ ಸಾಲ ರಸಗೊಬ್ಬರ ಮತ್ತು ಇತರೆ ಅಗತ್ಯ ಸೇವೆಗಳಿಗೆ ಬದ್ದರಾಗಿರುತ್ತೇವೆ ಹಾಗು ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಲಾಗುವುದು, ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ದಿಗಾಗಿ ಸದಾ ಶ್ರಮಿಸುತ್ತೆವೆ ಎಂದರು.

ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಮನಾಯ್ಕ್ ಹಾಗೂ ಗಂಗಲಕ್ಷ್ಮಮ್ಮ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜ್, ತೂಬಗೆರೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ರಂಗಪ್ಪ, ಗಂಗಸಂದ್ರ ಶ್ರೀಧರ್, ಚಿದಾನಂದ, ಮೇಳೇಕೋಟೆ ಆಂಜಿನಪ್ಪ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀಧರ್. ಎಂ ಮುನೇಗೌಡ‌, ನಂಜೇಗೌಡ, ಸದಸ್ಯರುಗಳಾದ ಮುದ್ದಣ್ಣ, ಪಿಳ್ಳಪ್ಪ, ವೆಂಕಟೇಶ, ಅನುಸೂಯಮ್ಮ, ಹನುಮಂತರಾಯಪ್ಪ, ಮುನಿರಾಜ್ ಹಾಗು ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

45 minutes ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

21 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago