ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ

ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿ ಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ರಾಮನಾಯ್ಕ್, ಉಪಾಧ್ಯಕ್ಷರಾಗಿ ಗಂಗಲಕ್ಷ್ಮಮ್ಮ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ  ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮ ನಾಯ್ಕ್ ಮಾತನಾಡಿ, ಪಹಣಿ ಗಳ ಆಧಾರದ ಮೇಲೆ ಶೇ.3 ರಷ್ಟು ಬಡ್ಡಿದರದಲ್ಲಿ ರೈತರಿಗೆ ಕೃಷಿ ಸಾಲ ರಸಗೊಬ್ಬರ ಮತ್ತು ಇತರೆ ಅಗತ್ಯ ಸೇವೆಗಳಿಗೆ ಬದ್ದರಾಗಿರುತ್ತೇವೆ ಹಾಗು ಸಂಘಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಲಾಗುವುದು, ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ದಿಗಾಗಿ ಸದಾ ಶ್ರಮಿಸುತ್ತೆವೆ ಎಂದರು.

ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಮನಾಯ್ಕ್ ಹಾಗೂ ಗಂಗಲಕ್ಷ್ಮಮ್ಮ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜ್, ತೂಬಗೆರೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ರಂಗಪ್ಪ, ಗಂಗಸಂದ್ರ ಶ್ರೀಧರ್, ಚಿದಾನಂದ, ಮೇಳೇಕೋಟೆ ಆಂಜಿನಪ್ಪ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀಧರ್. ಎಂ ಮುನೇಗೌಡ‌, ನಂಜೇಗೌಡ, ಸದಸ್ಯರುಗಳಾದ ಮುದ್ದಣ್ಣ, ಪಿಳ್ಳಪ್ಪ, ವೆಂಕಟೇಶ, ಅನುಸೂಯಮ್ಮ, ಹನುಮಂತರಾಯಪ್ಪ, ಮುನಿರಾಜ್ ಹಾಗು ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

31 minutes ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

13 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

14 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago