ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ, ಉಪಾಧ್ಯಕ್ಷರಾಗಿ ಅನುಸೂಯಮ್ಮ ಶೆಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.
ಇನ್ನು ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯಮ್ಮ ಶೆಟ್ಟಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಾಗವೇಣಿ ಅವಿರೋಧವಾಗಿ ಆಯ್ಕೆಮಾಡಿದರು.
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮುಖಂಡರು ಹೂವಿನ ಹಾರಗಳನ್ನು ಹಾಕುವುದರ ಮೂಲಕ ಸಿಹಿಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಾದ ನಂಜೇಗೌಡ ಮಾತನಾಡಿ, ಎಲ್ಲಾ ಸದಸ್ಯರ ಬೆಂಬಲವನ್ನು ತೆಗೆದುಕೊಂಡು ನಿರ್ಭೀತಿಯಿಂದ ಕೆಲಸ ಮಾಡುತ್ತೇನೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ವತಿಯಿಂದ ನೀಡಲಾಗುತ್ತಿರುವ ಆಹಾರಧಾನ್ಯವನ್ನು ನಮ್ಮ ಸಂಘದ ವತಿಯಿಂದಲೇ ಕೊಡಲು ತೀರ್ಮಾನ ಮಾಡಿಕೊಂಡಿದ್ದೇವೆ. ನಮ್ಮ ಸಂಘದ ವತಿಯಿಂದ ಎಲ್ಲಾ ರೈತರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಹೆಚ್ಚಾಗಿ ಸಾಲವನ್ನು ಕೊಡಲು ಶ್ರಮಿಸುತ್ತೇನೆ. ಎಲ್ಲಾ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಚಿರ ಋಣಿಯಾಗಿರುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿಎನ್ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಆಂಜನಪ್ಪ, ಹಾಡೋನಹಳ್ಳಿ ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಕೆ. ಶ್ರೀಧರ್,ಎಂ. ಮುನೇಗೌಡ,ಹೆಚ್. ಎಸ್. ಪಿಳ್ಳಪ್ಪ,ಆರ್. ಹನುಮಂತರಾಯಪ್ಪ, ಎನ್. ಮುನಿರಾಜು, ಎನ್. ವಿಜಯಕುಮಾರ್, ಬಿ.ವೆಂಕಟೇಶ್, ಗಂಗಲಕ್ಷಮ್ಮ, ರಾಮನಾಯಕ್, ಲೋಕನಾಯಕ್, ಸಂತೋಷ್, ಹರ್ಷಾ, ಬ್ಯಾಂಕ್ ಸಿಬ್ಬಂದಿ ಟಿ. ಎನ್.ರಾಘವೇಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್, ಚುನಾವಣೆ ಅಧಿಕಾರಿ ನಾಗವೇಣಿ ಹಾಜರಿದ್ದರು,
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…