ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ, ಉಪಾಧ್ಯಕ್ಷರಾಗಿ ಅನುಸೂಯಮ್ಮ ಶೆಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.
ಇನ್ನು ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯಮ್ಮ ಶೆಟ್ಟಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಾಗವೇಣಿ ಅವಿರೋಧವಾಗಿ ಆಯ್ಕೆಮಾಡಿದರು.
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮುಖಂಡರು ಹೂವಿನ ಹಾರಗಳನ್ನು ಹಾಕುವುದರ ಮೂಲಕ ಸಿಹಿಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಾದ ನಂಜೇಗೌಡ ಮಾತನಾಡಿ, ಎಲ್ಲಾ ಸದಸ್ಯರ ಬೆಂಬಲವನ್ನು ತೆಗೆದುಕೊಂಡು ನಿರ್ಭೀತಿಯಿಂದ ಕೆಲಸ ಮಾಡುತ್ತೇನೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ವತಿಯಿಂದ ನೀಡಲಾಗುತ್ತಿರುವ ಆಹಾರಧಾನ್ಯವನ್ನು ನಮ್ಮ ಸಂಘದ ವತಿಯಿಂದಲೇ ಕೊಡಲು ತೀರ್ಮಾನ ಮಾಡಿಕೊಂಡಿದ್ದೇವೆ. ನಮ್ಮ ಸಂಘದ ವತಿಯಿಂದ ಎಲ್ಲಾ ರೈತರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಹೆಚ್ಚಾಗಿ ಸಾಲವನ್ನು ಕೊಡಲು ಶ್ರಮಿಸುತ್ತೇನೆ. ಎಲ್ಲಾ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಚಿರ ಋಣಿಯಾಗಿರುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿಎನ್ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಆಂಜನಪ್ಪ, ಹಾಡೋನಹಳ್ಳಿ ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಕೆ. ಶ್ರೀಧರ್,ಎಂ. ಮುನೇಗೌಡ,ಹೆಚ್. ಎಸ್. ಪಿಳ್ಳಪ್ಪ,ಆರ್. ಹನುಮಂತರಾಯಪ್ಪ, ಎನ್. ಮುನಿರಾಜು, ಎನ್. ವಿಜಯಕುಮಾರ್, ಬಿ.ವೆಂಕಟೇಶ್, ಗಂಗಲಕ್ಷಮ್ಮ, ರಾಮನಾಯಕ್, ಲೋಕನಾಯಕ್, ಸಂತೋಷ್, ಹರ್ಷಾ, ಬ್ಯಾಂಕ್ ಸಿಬ್ಬಂದಿ ಟಿ. ಎನ್.ರಾಘವೇಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್, ಚುನಾವಣೆ ಅಧಿಕಾರಿ ನಾಗವೇಣಿ ಹಾಜರಿದ್ದರು,
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…