ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ, ಉಪಾಧ್ಯಕ್ಷರಾಗಿ ಅನುಸೂಯಮ್ಮ ಶೆಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.

ಇನ್ನು ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯಮ್ಮ ಶೆಟ್ಟಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಾಗವೇಣಿ ಅವಿರೋಧವಾಗಿ ಆಯ್ಕೆಮಾಡಿದರು.

ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮುಖಂಡರು ಹೂವಿನ ಹಾರಗಳನ್ನು ಹಾಕುವುದರ ಮೂಲಕ ಸಿಹಿಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷರಾದ ನಂಜೇಗೌಡ ಮಾತನಾಡಿ, ಎಲ್ಲಾ ಸದಸ್ಯರ ಬೆಂಬಲವನ್ನು ತೆಗೆದುಕೊಂಡು ನಿರ್ಭೀತಿಯಿಂದ ಕೆಲಸ ಮಾಡುತ್ತೇನೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ವತಿಯಿಂದ ನೀಡಲಾಗುತ್ತಿರುವ ಆಹಾರಧಾನ್ಯವನ್ನು ನಮ್ಮ ಸಂಘದ ವತಿಯಿಂದಲೇ ಕೊಡಲು ತೀರ್ಮಾನ ಮಾಡಿಕೊಂಡಿದ್ದೇವೆ. ನಮ್ಮ ಸಂಘದ ವತಿಯಿಂದ ಎಲ್ಲಾ ರೈತರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಹೆಚ್ಚಾಗಿ ಸಾಲವನ್ನು ಕೊಡಲು ಶ್ರಮಿಸುತ್ತೇನೆ. ಎಲ್ಲಾ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಚಿರ ಋಣಿಯಾಗಿರುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿಎನ್ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಆಂಜನಪ್ಪ, ಹಾಡೋನಹಳ್ಳಿ ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಕೆ. ಶ್ರೀಧರ್,ಎಂ. ಮುನೇಗೌಡ,ಹೆಚ್. ಎಸ್. ಪಿಳ್ಳಪ್ಪ,ಆರ್. ಹನುಮಂತರಾಯಪ್ಪ, ಎನ್. ಮುನಿರಾಜು, ಎನ್. ವಿಜಯಕುಮಾರ್, ಬಿ.ವೆಂಕಟೇಶ್, ಗಂಗಲಕ್ಷಮ್ಮ, ರಾಮನಾಯಕ್, ಲೋಕನಾಯಕ್, ಸಂತೋಷ್, ಹರ್ಷಾ, ಬ್ಯಾಂಕ್ ಸಿಬ್ಬಂದಿ ಟಿ. ಎನ್.ರಾಘವೇಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್, ಚುನಾವಣೆ ಅಧಿಕಾರಿ ನಾಗವೇಣಿ ಹಾಜರಿದ್ದರು,

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago