ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ, ಉಪಾಧ್ಯಕ್ಷರಾಗಿ ಅನುಸೂಯಮ್ಮ ಶೆಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.
ಇನ್ನು ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯಮ್ಮ ಶೆಟ್ಟಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಾಗವೇಣಿ ಅವಿರೋಧವಾಗಿ ಆಯ್ಕೆಮಾಡಿದರು.
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮುಖಂಡರು ಹೂವಿನ ಹಾರಗಳನ್ನು ಹಾಕುವುದರ ಮೂಲಕ ಸಿಹಿಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಾದ ನಂಜೇಗೌಡ ಮಾತನಾಡಿ, ಎಲ್ಲಾ ಸದಸ್ಯರ ಬೆಂಬಲವನ್ನು ತೆಗೆದುಕೊಂಡು ನಿರ್ಭೀತಿಯಿಂದ ಕೆಲಸ ಮಾಡುತ್ತೇನೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ವತಿಯಿಂದ ನೀಡಲಾಗುತ್ತಿರುವ ಆಹಾರಧಾನ್ಯವನ್ನು ನಮ್ಮ ಸಂಘದ ವತಿಯಿಂದಲೇ ಕೊಡಲು ತೀರ್ಮಾನ ಮಾಡಿಕೊಂಡಿದ್ದೇವೆ. ನಮ್ಮ ಸಂಘದ ವತಿಯಿಂದ ಎಲ್ಲಾ ರೈತರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಹೆಚ್ಚಾಗಿ ಸಾಲವನ್ನು ಕೊಡಲು ಶ್ರಮಿಸುತ್ತೇನೆ. ಎಲ್ಲಾ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಚಿರ ಋಣಿಯಾಗಿರುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿಎನ್ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಆಂಜನಪ್ಪ, ಹಾಡೋನಹಳ್ಳಿ ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಕೆ. ಶ್ರೀಧರ್,ಎಂ. ಮುನೇಗೌಡ,ಹೆಚ್. ಎಸ್. ಪಿಳ್ಳಪ್ಪ,ಆರ್. ಹನುಮಂತರಾಯಪ್ಪ, ಎನ್. ಮುನಿರಾಜು, ಎನ್. ವಿಜಯಕುಮಾರ್, ಬಿ.ವೆಂಕಟೇಶ್, ಗಂಗಲಕ್ಷಮ್ಮ, ರಾಮನಾಯಕ್, ಲೋಕನಾಯಕ್, ಸಂತೋಷ್, ಹರ್ಷಾ, ಬ್ಯಾಂಕ್ ಸಿಬ್ಬಂದಿ ಟಿ. ಎನ್.ರಾಘವೇಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್, ಚುನಾವಣೆ ಅಧಿಕಾರಿ ನಾಗವೇಣಿ ಹಾಜರಿದ್ದರು,
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…