ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂಜೇಗೌಡ, ಉಪಾಧ್ಯಕ್ಷರಾಗಿ ಅನುಸೂಯಮ್ಮ ಶೆಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.

ಇನ್ನು ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯಮ್ಮ ಶೆಟ್ಟಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಾಗವೇಣಿ ಅವಿರೋಧವಾಗಿ ಆಯ್ಕೆಮಾಡಿದರು.

ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮುಖಂಡರು ಹೂವಿನ ಹಾರಗಳನ್ನು ಹಾಕುವುದರ ಮೂಲಕ ಸಿಹಿಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷರಾದ ನಂಜೇಗೌಡ ಮಾತನಾಡಿ, ಎಲ್ಲಾ ಸದಸ್ಯರ ಬೆಂಬಲವನ್ನು ತೆಗೆದುಕೊಂಡು ನಿರ್ಭೀತಿಯಿಂದ ಕೆಲಸ ಮಾಡುತ್ತೇನೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ವತಿಯಿಂದ ನೀಡಲಾಗುತ್ತಿರುವ ಆಹಾರಧಾನ್ಯವನ್ನು ನಮ್ಮ ಸಂಘದ ವತಿಯಿಂದಲೇ ಕೊಡಲು ತೀರ್ಮಾನ ಮಾಡಿಕೊಂಡಿದ್ದೇವೆ. ನಮ್ಮ ಸಂಘದ ವತಿಯಿಂದ ಎಲ್ಲಾ ರೈತರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಹೆಚ್ಚಾಗಿ ಸಾಲವನ್ನು ಕೊಡಲು ಶ್ರಮಿಸುತ್ತೇನೆ. ಎಲ್ಲಾ ಸದಸ್ಯರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಚಿರ ಋಣಿಯಾಗಿರುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿಎನ್ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಆಂಜನಪ್ಪ, ಹಾಡೋನಹಳ್ಳಿ ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾದ ಜಿ. ಕೆ. ಶ್ರೀಧರ್,ಎಂ. ಮುನೇಗೌಡ,ಹೆಚ್. ಎಸ್. ಪಿಳ್ಳಪ್ಪ,ಆರ್. ಹನುಮಂತರಾಯಪ್ಪ, ಎನ್. ಮುನಿರಾಜು, ಎನ್. ವಿಜಯಕುಮಾರ್, ಬಿ.ವೆಂಕಟೇಶ್, ಗಂಗಲಕ್ಷಮ್ಮ, ರಾಮನಾಯಕ್, ಲೋಕನಾಯಕ್, ಸಂತೋಷ್, ಹರ್ಷಾ, ಬ್ಯಾಂಕ್ ಸಿಬ್ಬಂದಿ ಟಿ. ಎನ್.ರಾಘವೇಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್, ಚುನಾವಣೆ ಅಧಿಕಾರಿ ನಾಗವೇಣಿ ಹಾಜರಿದ್ದರು,

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago