ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.
ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.
ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…