ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.
ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.
ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…