ಹಾಡೋನಹಳ್ಳಿ ಸರ್ಕಲ್ ನ CL7 ಬಾರ್ ಅಂಡ್ ರೆಸ್ಟೋರೆಂಟ್ ಅನುಮತಿ ರದ್ದತಿಗೆ ದೂರು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.

ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.

 ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

2 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

9 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

9 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

12 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

23 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

1 day ago