ಹಾಡೋನಹಳ್ಳಿ ಸರ್ಕಲ್ ನ CL7 ಬಾರ್ ಅಂಡ್ ರೆಸ್ಟೋರೆಂಟ್ ಅನುಮತಿ ರದ್ದತಿಗೆ ದೂರು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.

ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.

 ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago