ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.
ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.
ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…