ಹಾಡೋನಹಳ್ಳಿ ಸರ್ಕಲ್ ನ CL7 ಬಾರ್ ಅಂಡ್ ರೆಸ್ಟೋರೆಂಟ್ ಅನುಮತಿ ರದ್ದತಿಗೆ ದೂರು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್‌ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.

ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.

 ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

3 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago