ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕೆಂದು ತಹಶೀಲ್ದಾರ್, ದೊಡ್ಡಬಳ್ಳಾಪುರ ಅಬಕಾರಿ ನಿರೀಕ್ಷಕ, ಜಿಲ್ಲಾ ಅಬಕಾರಿ ಆಯುಕ್ತರಿಗೆ ಹಾಡೋನಹಳ್ಳಿ ಗ್ರಾಮಸ್ಥರೊಬ್ಬರು ಲಿಖತ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮದ ಹಾಡೋನಹಳ್ಳಿ ಸರ್ಕಲ್ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಿದ್ದು, ಈ ವಿಚಾರ ಗ್ರಾಮಸ್ಥರ ಪರಿಗಣನೆಗೆ ಬಂದಿರುವುದಿಲ್ಲ. ಲೈಸನ್ಸ್ ಅನುಮತಿ ಅಬಕಾರಿ ಕಾನೂನು ವಿರುದ್ಧವಾಗಿರುತ್ತದೆ ಹಾಗೂ ಹಾಡೋನಹಳ್ಳಿ ಪ್ರಮುಖ ರಸ್ತೆಗೆ ಹೊಂದಿಕೊಂಡಿರುತ್ತದೆ. ಹಾಡೋನಹಳ್ಳಿ ಸರ್ಕಲ್ ಘಾಟಿ ಸುಬ್ರಮಣ್ಯ ಹಾಗೂ ತೂಬಗೆರೆಗೆ ಹೋಗುವಂತ ಪ್ರಮುಖ ರಸ್ತೆ. ಇಲ್ಲಿಗೆ ದಿನವೂ ನೂರಾರು ಹೆಣ್ಣು ಮಕ್ಕಳು ಪ್ರೌಢ ಶಾಲೆಗೆ ಹಾಗೂ ಕಾಲೇಜಿಗೆ ಹೋಗಲು ಬಸ್ಸು ಹತ್ತುವ ಸ್ಥಳವಾಗಿದೆ.
ಇದು ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ರಸ್ತೆಯಾಗಿದೆ. ಸರ್ಕಾರಿ ಕಟ್ಟಡ ಹಾಡೋನಹಳ್ಳಿ ಪಂಚಾಯಿತಿ ಸರಿ ಸುಮಾರು 70 ಮೀಟರ್ ಒಳಗೊಂಡಿದೆ. ಹಾಗೆ ದೇವಸ್ಥಾನಗಳಿದ್ದು, 100 ಮೀಟರ್ ದೂರದಲ್ಲಿ ದಲಿತರ ಕಾಲೋನಿಗಳಿವೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು CL7 ಬಾರ್ ಅಂಡ್ ರೆಸ್ಟೋರೆಂಟ್ ನಿಲ್ಲಿಸಬೇಕಾಗಿ ವಿನಂತಿ ಮಾಡುತ್ತೆನೆಂದು ತಿಳಿಸಿದ್ದಾರೆ.
ಒಂದು ಅನುಮತಿ ರದ್ದು ಮಾಡದೇ ಹೋದರೆ ಬಾರ್ ಓಪನಿಂಗ್ ದಿನವೇ ಊರಿನ ಸಮಸ್ತ ಜನರು ಯಾವುದೇ ಅನುಮತಿ ಪಡೆಯದೆ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…