ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ.
ಈ ಕ್ರೀಡಾಕೂಟದಲ್ಲಿ ಜೈ ಆಂಜನೇಯ, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್, ರಾಕ್ ಅಂಡ್ ರೋಲ್ ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಟೂರ್ನಮೆಂಟ್ ನಲ್ಲಿ ‘ಜೈ ಆಂಜನೇಯ’ ತಂಡ ವಿಜೇತರಾಗಿ ಹೊರ ಹೊಮ್ಮಿದರೆ, ರಾಯಲ್ ಸ್ಟ್ರಾಂಗ್ ತಂಡ ರನ್ನರ್ ಅಪ್ ಆಗಿದೆ.
ಕೆಲಸ ನಿಮಿತ್ತ ಊರಿಂದ ಹೊರಹೋಗಿದ್ದ ಯುವಕರು ಕೂಡ, ಎರಡು ದಿನ ಕೆಲಸ ಬದಿಗೊತ್ತಿ ಎಲ್ಲರೂ ಕೂಡ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾಲ್ಯ ಸ್ನೇಹಿತರೆಲ್ಲಾ ಜೊತೆಗೂಡಿ ಖುಷಿ ಖುಷಿಯಿಂದ ಕ್ರಿಕೆಟ್ ಆಟ ಆಡಿದರು. ಆಟ ಆಡುವ ವೇಳೆ ಬಾಲ್ಯದ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದು ವಿಶೇಷವಾಗಿತ್ತು.
ವಿಜೇತ ಜೈ ಆಂಜಿನೇಯ ತಂಡಕ್ಕೆ ಟ್ರೋಫಿ ಜೊತೆಗೆ ನಗದು ಬಹುಮಾನ, ರನ್ನರ್ ಅಪ್ ರಾಯಲ್ ಸ್ಟ್ರಾಂಗ್ ಮತ್ತು ಮೂರನೇ ಸ್ಥಾನ ಪಡೆದ ಎಬಿಡಿ ಸ್ಟ್ರೈಕರ್ ಗೆ ಟ್ರೋಫಿ ಜೊತೆಗೆ ನಗದು ಬಹುಮಾನ ನೀಡಲಾಯಿತು.
ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿ ಮಾಡಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…