ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ.
ಈ ಕ್ರೀಡಾಕೂಟದಲ್ಲಿ ಜೈ ಆಂಜನೇಯ, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್, ರಾಕ್ ಅಂಡ್ ರೋಲ್ ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಟೂರ್ನಮೆಂಟ್ ನಲ್ಲಿ ‘ಜೈ ಆಂಜನೇಯ’ ತಂಡ ವಿಜೇತರಾಗಿ ಹೊರ ಹೊಮ್ಮಿದರೆ, ರಾಯಲ್ ಸ್ಟ್ರಾಂಗ್ ತಂಡ ರನ್ನರ್ ಅಪ್ ಆಗಿದೆ.
ಕೆಲಸ ನಿಮಿತ್ತ ಊರಿಂದ ಹೊರಹೋಗಿದ್ದ ಯುವಕರು ಕೂಡ, ಎರಡು ದಿನ ಕೆಲಸ ಬದಿಗೊತ್ತಿ ಎಲ್ಲರೂ ಕೂಡ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾಲ್ಯ ಸ್ನೇಹಿತರೆಲ್ಲಾ ಜೊತೆಗೂಡಿ ಖುಷಿ ಖುಷಿಯಿಂದ ಕ್ರಿಕೆಟ್ ಆಟ ಆಡಿದರು. ಆಟ ಆಡುವ ವೇಳೆ ಬಾಲ್ಯದ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದು ವಿಶೇಷವಾಗಿತ್ತು.
ವಿಜೇತ ಜೈ ಆಂಜಿನೇಯ ತಂಡಕ್ಕೆ ಟ್ರೋಫಿ ಜೊತೆಗೆ ನಗದು ಬಹುಮಾನ, ರನ್ನರ್ ಅಪ್ ರಾಯಲ್ ಸ್ಟ್ರಾಂಗ್ ಮತ್ತು ಮೂರನೇ ಸ್ಥಾನ ಪಡೆದ ಎಬಿಡಿ ಸ್ಟ್ರೈಕರ್ ಗೆ ಟ್ರೋಫಿ ಜೊತೆಗೆ ನಗದು ಬಹುಮಾನ ನೀಡಲಾಯಿತು.
ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿ ಮಾಡಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…