ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ.
ಈ ಕ್ರೀಡಾಕೂಟದಲ್ಲಿ ಜೈ ಆಂಜನೇಯ, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್, ರಾಕ್ ಅಂಡ್ ರೋಲ್ ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಟೂರ್ನಮೆಂಟ್ ನಲ್ಲಿ ‘ಜೈ ಆಂಜನೇಯ’ ತಂಡ ವಿಜೇತರಾಗಿ ಹೊರ ಹೊಮ್ಮಿದರೆ, ರಾಯಲ್ ಸ್ಟ್ರಾಂಗ್ ತಂಡ ರನ್ನರ್ ಅಪ್ ಆಗಿದೆ.
ಕೆಲಸ ನಿಮಿತ್ತ ಊರಿಂದ ಹೊರಹೋಗಿದ್ದ ಯುವಕರು ಕೂಡ, ಎರಡು ದಿನ ಕೆಲಸ ಬದಿಗೊತ್ತಿ ಎಲ್ಲರೂ ಕೂಡ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾಲ್ಯ ಸ್ನೇಹಿತರೆಲ್ಲಾ ಜೊತೆಗೂಡಿ ಖುಷಿ ಖುಷಿಯಿಂದ ಕ್ರಿಕೆಟ್ ಆಟ ಆಡಿದರು. ಆಟ ಆಡುವ ವೇಳೆ ಬಾಲ್ಯದ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದು ವಿಶೇಷವಾಗಿತ್ತು.
ವಿಜೇತ ಜೈ ಆಂಜಿನೇಯ ತಂಡಕ್ಕೆ ಟ್ರೋಫಿ ಜೊತೆಗೆ ನಗದು ಬಹುಮಾನ, ರನ್ನರ್ ಅಪ್ ರಾಯಲ್ ಸ್ಟ್ರಾಂಗ್ ಮತ್ತು ಮೂರನೇ ಸ್ಥಾನ ಪಡೆದ ಎಬಿಡಿ ಸ್ಟ್ರೈಕರ್ ಗೆ ಟ್ರೋಫಿ ಜೊತೆಗೆ ನಗದು ಬಹುಮಾನ ನೀಡಲಾಯಿತು.
ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…