ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ.
ಈ ಕ್ರೀಡಾಕೂಟದಲ್ಲಿ ಜೈ ಆಂಜನೇಯ, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್, ರಾಕ್ ಅಂಡ್ ರೋಲ್ ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಟೂರ್ನಮೆಂಟ್ ನಲ್ಲಿ ‘ಜೈ ಆಂಜನೇಯ’ ತಂಡ ವಿಜೇತರಾಗಿ ಹೊರ ಹೊಮ್ಮಿದರೆ, ರಾಯಲ್ ಸ್ಟ್ರಾಂಗ್ ತಂಡ ರನ್ನರ್ ಅಪ್ ಆಗಿದೆ.
ಕೆಲಸ ನಿಮಿತ್ತ ಊರಿಂದ ಹೊರಹೋಗಿದ್ದ ಯುವಕರು ಕೂಡ, ಎರಡು ದಿನ ಕೆಲಸ ಬದಿಗೊತ್ತಿ ಎಲ್ಲರೂ ಕೂಡ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾಲ್ಯ ಸ್ನೇಹಿತರೆಲ್ಲಾ ಜೊತೆಗೂಡಿ ಖುಷಿ ಖುಷಿಯಿಂದ ಕ್ರಿಕೆಟ್ ಆಟ ಆಡಿದರು. ಆಟ ಆಡುವ ವೇಳೆ ಬಾಲ್ಯದ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದು ವಿಶೇಷವಾಗಿತ್ತು.
ವಿಜೇತ ಜೈ ಆಂಜಿನೇಯ ತಂಡಕ್ಕೆ ಟ್ರೋಫಿ ಜೊತೆಗೆ ನಗದು ಬಹುಮಾನ, ರನ್ನರ್ ಅಪ್ ರಾಯಲ್ ಸ್ಟ್ರಾಂಗ್ ಮತ್ತು ಮೂರನೇ ಸ್ಥಾನ ಪಡೆದ ಎಬಿಡಿ ಸ್ಟ್ರೈಕರ್ ಗೆ ಟ್ರೋಫಿ ಜೊತೆಗೆ ನಗದು ಬಹುಮಾನ ನೀಡಲಾಯಿತು.
ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿ ಮಾಡಿದರು.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…