ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಕಾಸ್ ಇದ್ರೆ ಮಾತ್ರ ಫೈಲ್ ಮೂವ್, ಇಲ್ಲ ಅಂದ್ರೆ ವಾಪಸ್: ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ

ದೊಡ್ಡಬಳ್ಳಾಪುರ: ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷ ಜನರ ಪರ ಕೆಲಸ ಮಾಡಬೇಕು. ಆದರೆ, ಅಧ್ಯಕ್ಷನ ಅಪ್ಪಣೆ ಇಲ್ಲದೆ ಯಾವುದೇ ಫೈಲ್‌ ಮುಂದಕ್ಕೆ ಹೋಗುವುದಿಲ್ಲ. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಓ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅದಕ್ಕೆ ತಾಜಾ ಉದಾಹರಣೆ ಎಂದರೆ ಪಂಚಾಯತಿ ಒಳಕ್ಕೆ ಹೋಗುತ್ತಿದ್ದಂತೆ ಮೊದಲು ಕಾಣುವುದು ಅಧ್ಯಕ್ಷರ ಅಪ್ಪಣೆ ಪತ್ರಗಳು. ಪಿಡಿಓ ಕಚೇರಿಯ ಬಾಗಿಲಿನಲ್ಲಿಯೇ ಈ ಆದೇಶವನ್ನು ಅಂಟಿಸಲಾಗಿದೆ.

ಪಂಚಾಯಿತಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗಲ್ಲ. ಒಂದು ಇ ಖಾತೆ ಮಾಡಿಸಲು ಕನಿಷ್ಠ 25 ಸಾವಿರ ಹಣ ಬೇಡಿಕೆ ಇಡುತ್ತಾರೆ. ಹಣ ಕೊಟ್ಟವರಿಗೆ ಕೇವಲ 15 ದಿನದಲ್ಲೇ ಇ ಖಾತೆ ಬರುತ್ತದೆ. ಚೌಕಾಸಿ ಮಾಡಿದವರಿಗೆ ತಡವಾಗುತ್ತದೆ.

ಇದಕ್ಕೆ ತಾಜಾ ಉದಾಹರಣೆಗೆ ಎಂದರೆ‌ ಹಾದ್ರೀಪುರ ಗ್ರಾಮದ ಚೆನ್ನಲಕ್ಷ್ಮಯ್ಯ ಎಂಬುವವರು ಕಳೆದ ಮೂರು ತಿಂಗಳ ಹಿಂದೆ ಇ ಖಾತೆ ಮಾಡಿಸಲು ದಾಖಲೆಗಳನ್ನು ಕೊಟ್ಟರು.

ಈ ವೇಳೆ ಲಂಚಕ್ಕೆ ಆಮೀಷವೊಡ್ಡಿದ್ದಾರೆ. ಅವರು ಕೇಳಿದಷ್ಟು ಅಲ್ಲದೇ ಇದ್ದರೂ, ಲಂಚ ಅಂತೂ ಕೊಟ್ಟರೂ. ಮಳೆ ಬಂದಾಗ ಮನೆಗೆ ನೀರು ನುಗ್ಗುತ್ತದೆ. ನೀರು ನುಗ್ಗಿದಾಗ ಪ್ರತೀ ಬಾರಿ ಪಿಡಿಓಗೆ ಹೇಳಿದರೂ ಬರೀ ಹಾರಿಕೆ ಉತ್ತರ ನೀಡಿ ಸುಮ್ಮನೆ ಆಗುತ್ತಾರೆ. ಹಾಗಾಗಿ ಹೇಗೋ ಸಾಲ ಮಾಡಿ ಮನೆ ಕಟ್ಟಿಕೊಳ್ಳೋಣ ಅಂತ ಇ ಖಾತೆಗೆ ಹಾಕಿದರೆ ಮೂರು ತಿಂಗಳಿನಿಂದ ಕಚೇರಿಗೂ ಮನೆಗೂ ಅಲೆಸಿ, ಪಿಐಡಿ ನಂಬರ್ ಇಲ್ಲ, ಮಿಸ್ಸಿಂಗ್ ಪ್ರಾಪರ್ಟಿಗೆ ಸೇರಿಸಿ ಮಾಡಿಸಬೇಕು ಎಂದು ಹೇಳಿ,‌ ಈಗ ಮೂರು ದಿನಗಳ‌ ಹಿಂದೆ ಸರಕಾರ ಪಿಐಡಿ ನಂಬರ್ ಮಾಡುವುದನ್ನು ನಿಲ್ಲಿಸಿದೆ ಎಂದು ಹೇಳಿ ಫೈಲ್ ವಾಪಸ್ ನೀಡುತ್ತಾರೆ. ಮೂರು ತಿಂಗಳಿನಿಂದ ಇವರು ಏನು ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರೆ ಹಾರಿಕೆ ಉತ್ತರ ಎಂದು‌ ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ‌‌

*ಅಧ್ಯಕ್ಷ ಮತ್ತು ಪಿಡಿಓ ದರ್ಬಾರ್*

ಈ ಪಂಚಾಯತಿಯಲ್ಲಿ ಅಧ್ಯಕ್ಷರ ಅಪ್ಪಣೆ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಕೆಲಸ ಆಗಬೇಕು ಎಂದರೆ ಮೊದಲು ಅಧ್ಯಕ್ಷನ‌ ಬಕೆಟ್ ಹಿಡಿಯಬೇಕು. ಇಲ್ಲದೇ ಇದ್ದರೆ ಇಲ್ಲಿ ಯಾವ ಕೆಲಸನೂ ಆಗಲ್ಲ. ಇದಕ್ಕೆ‌ ತಾಜಾ ಉದಾಹರಣೆ ಅವರು ಅಂಟಿಸಿರುವ ನೋಟೀಸ್. ಇನ್ನೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಮರಿಕೇರಿ 2016 ರಲ್ಲಿ ಹಾದ್ರೀಪುರ ಪಂಚಾಯತಿಗೆ ಬಂದರು. ಅಲ್ಲಿಂದ ಇಲ್ಲಿಯವರೆಗೆ ಇವರದ್ದೇ ದರ್ಬಾರ್. ಪಂಚಾಯತಿಯ ಪ್ರತಿ ಮನೆ ಮನೆ ಗೊತ್ತಿರುವುದರಿಂದ ಬಡವರಿಗೆ ಇವರು ಕೆಲಸವೇ ಮಾಡಲ್ಲ, ಬರೀ ಸಿರಿವಂತರಿಗೆ ಮಾತ್ರ ಕೆಲಸ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಸರಕಾರ 5 ವರ್ಷ ಮಾತ್ರ ಒಂದು ಪಂಚಾಯತಿಯಲ್ಲಿ ಕೆಲಸ ಮಾಡಲು ಪಿಡಿಓ ಗೆ ಅವಕಾಶ ನೀಡಿರುವುದು. ಆದರೆ ಅವಧಿ ಮುಗಿದರೂ ಇನ್ನೂ ಇಲ್ಲೇ ಏಕೆ ಎಂದು ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಈ ಖಾತೆ ಮಾಡಿಸಲು ದಾಖಲೆಗಳನ್ನು ನೀಡಿದ್ದೆ. ಕೇಳಿದಾಗ ಪ್ರತಿ ಬಾರಿ ಆ ದಾಖಲೆ ಸರಿ ಇಲ್ಲ,‌ ಮಾಡಿಸಿಕೊಂಡು ಬಾ, ಸರಿ ಪಡಿಸಿಕೊಂಡು ಹೋದರೆ ಮತ್ತೊಂದು ದಾಖಲೆ ಹೇಳುತ್ತಿದ್ದರು. ಅಧ್ಯಕ್ಷರ ಮೇಲೆ‌ ಪಿಡಿಓ, ಪಿಡಿಓ ಮೇಲೆ ಅಧ್ಯಕ್ಷರ ಹೇಳಿಕೊಂಡು, ಇಂದು ಸರಕಾರ ಪಿಐಡಿ ಮಾಡುವುದನ್ನು ಅನುಮತಿ ನೀಡಿಲ್ಲ ಎಂದು ಹೇಳಿ ದಾಖಲೆ ವಾಪಸ್ ನೀಡುತ್ತಿದ್ದಾರೆ. ಬಡವರಿಗೆ ಈ ಪಂಚಾಯತಿಯಲ್ಲಿ ನ್ಯಾಯವೇ ಇಲ್ಲ ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

6 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

17 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

17 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

23 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago