ದೊಡ್ಡಬಳ್ಳಾಪುರ: ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷ ಜನರ ಪರ ಕೆಲಸ ಮಾಡಬೇಕು. ಆದರೆ, ಅಧ್ಯಕ್ಷನ ಅಪ್ಪಣೆ ಇಲ್ಲದೆ ಯಾವುದೇ ಫೈಲ್ ಮುಂದಕ್ಕೆ ಹೋಗುವುದಿಲ್ಲ. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಓ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅದಕ್ಕೆ ತಾಜಾ ಉದಾಹರಣೆ ಎಂದರೆ ಪಂಚಾಯತಿ ಒಳಕ್ಕೆ ಹೋಗುತ್ತಿದ್ದಂತೆ ಮೊದಲು ಕಾಣುವುದು ಅಧ್ಯಕ್ಷರ ಅಪ್ಪಣೆ ಪತ್ರಗಳು. ಪಿಡಿಓ ಕಚೇರಿಯ ಬಾಗಿಲಿನಲ್ಲಿಯೇ ಈ ಆದೇಶವನ್ನು ಅಂಟಿಸಲಾಗಿದೆ.
ಪಂಚಾಯಿತಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗಲ್ಲ. ಒಂದು ಇ ಖಾತೆ ಮಾಡಿಸಲು ಕನಿಷ್ಠ 25 ಸಾವಿರ ಹಣ ಬೇಡಿಕೆ ಇಡುತ್ತಾರೆ. ಹಣ ಕೊಟ್ಟವರಿಗೆ ಕೇವಲ 15 ದಿನದಲ್ಲೇ ಇ ಖಾತೆ ಬರುತ್ತದೆ. ಚೌಕಾಸಿ ಮಾಡಿದವರಿಗೆ ತಡವಾಗುತ್ತದೆ.
ಇದಕ್ಕೆ ತಾಜಾ ಉದಾಹರಣೆಗೆ ಎಂದರೆ ಹಾದ್ರೀಪುರ ಗ್ರಾಮದ ಚೆನ್ನಲಕ್ಷ್ಮಯ್ಯ ಎಂಬುವವರು ಕಳೆದ ಮೂರು ತಿಂಗಳ ಹಿಂದೆ ಇ ಖಾತೆ ಮಾಡಿಸಲು ದಾಖಲೆಗಳನ್ನು ಕೊಟ್ಟರು.
ಈ ವೇಳೆ ಲಂಚಕ್ಕೆ ಆಮೀಷವೊಡ್ಡಿದ್ದಾರೆ. ಅವರು ಕೇಳಿದಷ್ಟು ಅಲ್ಲದೇ ಇದ್ದರೂ, ಲಂಚ ಅಂತೂ ಕೊಟ್ಟರೂ. ಮಳೆ ಬಂದಾಗ ಮನೆಗೆ ನೀರು ನುಗ್ಗುತ್ತದೆ. ನೀರು ನುಗ್ಗಿದಾಗ ಪ್ರತೀ ಬಾರಿ ಪಿಡಿಓಗೆ ಹೇಳಿದರೂ ಬರೀ ಹಾರಿಕೆ ಉತ್ತರ ನೀಡಿ ಸುಮ್ಮನೆ ಆಗುತ್ತಾರೆ. ಹಾಗಾಗಿ ಹೇಗೋ ಸಾಲ ಮಾಡಿ ಮನೆ ಕಟ್ಟಿಕೊಳ್ಳೋಣ ಅಂತ ಇ ಖಾತೆಗೆ ಹಾಕಿದರೆ ಮೂರು ತಿಂಗಳಿನಿಂದ ಕಚೇರಿಗೂ ಮನೆಗೂ ಅಲೆಸಿ, ಪಿಐಡಿ ನಂಬರ್ ಇಲ್ಲ, ಮಿಸ್ಸಿಂಗ್ ಪ್ರಾಪರ್ಟಿಗೆ ಸೇರಿಸಿ ಮಾಡಿಸಬೇಕು ಎಂದು ಹೇಳಿ, ಈಗ ಮೂರು ದಿನಗಳ ಹಿಂದೆ ಸರಕಾರ ಪಿಐಡಿ ನಂಬರ್ ಮಾಡುವುದನ್ನು ನಿಲ್ಲಿಸಿದೆ ಎಂದು ಹೇಳಿ ಫೈಲ್ ವಾಪಸ್ ನೀಡುತ್ತಾರೆ. ಮೂರು ತಿಂಗಳಿನಿಂದ ಇವರು ಏನು ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರೆ ಹಾರಿಕೆ ಉತ್ತರ ಎಂದು ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ
*ಅಧ್ಯಕ್ಷ ಮತ್ತು ಪಿಡಿಓ ದರ್ಬಾರ್*
ಈ ಪಂಚಾಯತಿಯಲ್ಲಿ ಅಧ್ಯಕ್ಷರ ಅಪ್ಪಣೆ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಕೆಲಸ ಆಗಬೇಕು ಎಂದರೆ ಮೊದಲು ಅಧ್ಯಕ್ಷನ ಬಕೆಟ್ ಹಿಡಿಯಬೇಕು. ಇಲ್ಲದೇ ಇದ್ದರೆ ಇಲ್ಲಿ ಯಾವ ಕೆಲಸನೂ ಆಗಲ್ಲ. ಇದಕ್ಕೆ ತಾಜಾ ಉದಾಹರಣೆ ಅವರು ಅಂಟಿಸಿರುವ ನೋಟೀಸ್. ಇನ್ನೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಮರಿಕೇರಿ 2016 ರಲ್ಲಿ ಹಾದ್ರೀಪುರ ಪಂಚಾಯತಿಗೆ ಬಂದರು. ಅಲ್ಲಿಂದ ಇಲ್ಲಿಯವರೆಗೆ ಇವರದ್ದೇ ದರ್ಬಾರ್. ಪಂಚಾಯತಿಯ ಪ್ರತಿ ಮನೆ ಮನೆ ಗೊತ್ತಿರುವುದರಿಂದ ಬಡವರಿಗೆ ಇವರು ಕೆಲಸವೇ ಮಾಡಲ್ಲ, ಬರೀ ಸಿರಿವಂತರಿಗೆ ಮಾತ್ರ ಕೆಲಸ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಸರಕಾರ 5 ವರ್ಷ ಮಾತ್ರ ಒಂದು ಪಂಚಾಯತಿಯಲ್ಲಿ ಕೆಲಸ ಮಾಡಲು ಪಿಡಿಓ ಗೆ ಅವಕಾಶ ನೀಡಿರುವುದು. ಆದರೆ ಅವಧಿ ಮುಗಿದರೂ ಇನ್ನೂ ಇಲ್ಲೇ ಏಕೆ ಎಂದು ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಈ ಖಾತೆ ಮಾಡಿಸಲು ದಾಖಲೆಗಳನ್ನು ನೀಡಿದ್ದೆ. ಕೇಳಿದಾಗ ಪ್ರತಿ ಬಾರಿ ಆ ದಾಖಲೆ ಸರಿ ಇಲ್ಲ, ಮಾಡಿಸಿಕೊಂಡು ಬಾ, ಸರಿ ಪಡಿಸಿಕೊಂಡು ಹೋದರೆ ಮತ್ತೊಂದು ದಾಖಲೆ ಹೇಳುತ್ತಿದ್ದರು. ಅಧ್ಯಕ್ಷರ ಮೇಲೆ ಪಿಡಿಓ, ಪಿಡಿಓ ಮೇಲೆ ಅಧ್ಯಕ್ಷರ ಹೇಳಿಕೊಂಡು, ಇಂದು ಸರಕಾರ ಪಿಐಡಿ ಮಾಡುವುದನ್ನು ಅನುಮತಿ ನೀಡಿಲ್ಲ ಎಂದು ಹೇಳಿ ದಾಖಲೆ ವಾಪಸ್ ನೀಡುತ್ತಿದ್ದಾರೆ. ಬಡವರಿಗೆ ಈ ಪಂಚಾಯತಿಯಲ್ಲಿ ನ್ಯಾಯವೇ ಇಲ್ಲ ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…