ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಕಾಸ್ ಇದ್ರೆ ಮಾತ್ರ ಫೈಲ್ ಮೂವ್, ಇಲ್ಲ ಅಂದ್ರೆ ವಾಪಸ್: ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ

ದೊಡ್ಡಬಳ್ಳಾಪುರ: ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷ ಜನರ ಪರ ಕೆಲಸ ಮಾಡಬೇಕು. ಆದರೆ, ಅಧ್ಯಕ್ಷನ ಅಪ್ಪಣೆ ಇಲ್ಲದೆ ಯಾವುದೇ ಫೈಲ್‌ ಮುಂದಕ್ಕೆ ಹೋಗುವುದಿಲ್ಲ. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಓ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅದಕ್ಕೆ ತಾಜಾ ಉದಾಹರಣೆ ಎಂದರೆ ಪಂಚಾಯತಿ ಒಳಕ್ಕೆ ಹೋಗುತ್ತಿದ್ದಂತೆ ಮೊದಲು ಕಾಣುವುದು ಅಧ್ಯಕ್ಷರ ಅಪ್ಪಣೆ ಪತ್ರಗಳು. ಪಿಡಿಓ ಕಚೇರಿಯ ಬಾಗಿಲಿನಲ್ಲಿಯೇ ಈ ಆದೇಶವನ್ನು ಅಂಟಿಸಲಾಗಿದೆ.

ಪಂಚಾಯಿತಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗಲ್ಲ. ಒಂದು ಇ ಖಾತೆ ಮಾಡಿಸಲು ಕನಿಷ್ಠ 25 ಸಾವಿರ ಹಣ ಬೇಡಿಕೆ ಇಡುತ್ತಾರೆ. ಹಣ ಕೊಟ್ಟವರಿಗೆ ಕೇವಲ 15 ದಿನದಲ್ಲೇ ಇ ಖಾತೆ ಬರುತ್ತದೆ. ಚೌಕಾಸಿ ಮಾಡಿದವರಿಗೆ ತಡವಾಗುತ್ತದೆ.

ಇದಕ್ಕೆ ತಾಜಾ ಉದಾಹರಣೆಗೆ ಎಂದರೆ‌ ಹಾದ್ರೀಪುರ ಗ್ರಾಮದ ಚೆನ್ನಲಕ್ಷ್ಮಯ್ಯ ಎಂಬುವವರು ಕಳೆದ ಮೂರು ತಿಂಗಳ ಹಿಂದೆ ಇ ಖಾತೆ ಮಾಡಿಸಲು ದಾಖಲೆಗಳನ್ನು ಕೊಟ್ಟರು.

ಈ ವೇಳೆ ಲಂಚಕ್ಕೆ ಆಮೀಷವೊಡ್ಡಿದ್ದಾರೆ. ಅವರು ಕೇಳಿದಷ್ಟು ಅಲ್ಲದೇ ಇದ್ದರೂ, ಲಂಚ ಅಂತೂ ಕೊಟ್ಟರೂ. ಮಳೆ ಬಂದಾಗ ಮನೆಗೆ ನೀರು ನುಗ್ಗುತ್ತದೆ. ನೀರು ನುಗ್ಗಿದಾಗ ಪ್ರತೀ ಬಾರಿ ಪಿಡಿಓಗೆ ಹೇಳಿದರೂ ಬರೀ ಹಾರಿಕೆ ಉತ್ತರ ನೀಡಿ ಸುಮ್ಮನೆ ಆಗುತ್ತಾರೆ. ಹಾಗಾಗಿ ಹೇಗೋ ಸಾಲ ಮಾಡಿ ಮನೆ ಕಟ್ಟಿಕೊಳ್ಳೋಣ ಅಂತ ಇ ಖಾತೆಗೆ ಹಾಕಿದರೆ ಮೂರು ತಿಂಗಳಿನಿಂದ ಕಚೇರಿಗೂ ಮನೆಗೂ ಅಲೆಸಿ, ಪಿಐಡಿ ನಂಬರ್ ಇಲ್ಲ, ಮಿಸ್ಸಿಂಗ್ ಪ್ರಾಪರ್ಟಿಗೆ ಸೇರಿಸಿ ಮಾಡಿಸಬೇಕು ಎಂದು ಹೇಳಿ,‌ ಈಗ ಮೂರು ದಿನಗಳ‌ ಹಿಂದೆ ಸರಕಾರ ಪಿಐಡಿ ನಂಬರ್ ಮಾಡುವುದನ್ನು ನಿಲ್ಲಿಸಿದೆ ಎಂದು ಹೇಳಿ ಫೈಲ್ ವಾಪಸ್ ನೀಡುತ್ತಾರೆ. ಮೂರು ತಿಂಗಳಿನಿಂದ ಇವರು ಏನು ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರೆ ಹಾರಿಕೆ ಉತ್ತರ ಎಂದು‌ ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ‌‌

*ಅಧ್ಯಕ್ಷ ಮತ್ತು ಪಿಡಿಓ ದರ್ಬಾರ್*

ಈ ಪಂಚಾಯತಿಯಲ್ಲಿ ಅಧ್ಯಕ್ಷರ ಅಪ್ಪಣೆ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಕೆಲಸ ಆಗಬೇಕು ಎಂದರೆ ಮೊದಲು ಅಧ್ಯಕ್ಷನ‌ ಬಕೆಟ್ ಹಿಡಿಯಬೇಕು. ಇಲ್ಲದೇ ಇದ್ದರೆ ಇಲ್ಲಿ ಯಾವ ಕೆಲಸನೂ ಆಗಲ್ಲ. ಇದಕ್ಕೆ‌ ತಾಜಾ ಉದಾಹರಣೆ ಅವರು ಅಂಟಿಸಿರುವ ನೋಟೀಸ್. ಇನ್ನೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಮರಿಕೇರಿ 2016 ರಲ್ಲಿ ಹಾದ್ರೀಪುರ ಪಂಚಾಯತಿಗೆ ಬಂದರು. ಅಲ್ಲಿಂದ ಇಲ್ಲಿಯವರೆಗೆ ಇವರದ್ದೇ ದರ್ಬಾರ್. ಪಂಚಾಯತಿಯ ಪ್ರತಿ ಮನೆ ಮನೆ ಗೊತ್ತಿರುವುದರಿಂದ ಬಡವರಿಗೆ ಇವರು ಕೆಲಸವೇ ಮಾಡಲ್ಲ, ಬರೀ ಸಿರಿವಂತರಿಗೆ ಮಾತ್ರ ಕೆಲಸ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಸರಕಾರ 5 ವರ್ಷ ಮಾತ್ರ ಒಂದು ಪಂಚಾಯತಿಯಲ್ಲಿ ಕೆಲಸ ಮಾಡಲು ಪಿಡಿಓ ಗೆ ಅವಕಾಶ ನೀಡಿರುವುದು. ಆದರೆ ಅವಧಿ ಮುಗಿದರೂ ಇನ್ನೂ ಇಲ್ಲೇ ಏಕೆ ಎಂದು ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಈ ಖಾತೆ ಮಾಡಿಸಲು ದಾಖಲೆಗಳನ್ನು ನೀಡಿದ್ದೆ. ಕೇಳಿದಾಗ ಪ್ರತಿ ಬಾರಿ ಆ ದಾಖಲೆ ಸರಿ ಇಲ್ಲ,‌ ಮಾಡಿಸಿಕೊಂಡು ಬಾ, ಸರಿ ಪಡಿಸಿಕೊಂಡು ಹೋದರೆ ಮತ್ತೊಂದು ದಾಖಲೆ ಹೇಳುತ್ತಿದ್ದರು. ಅಧ್ಯಕ್ಷರ ಮೇಲೆ‌ ಪಿಡಿಓ, ಪಿಡಿಓ ಮೇಲೆ ಅಧ್ಯಕ್ಷರ ಹೇಳಿಕೊಂಡು, ಇಂದು ಸರಕಾರ ಪಿಐಡಿ ಮಾಡುವುದನ್ನು ಅನುಮತಿ ನೀಡಿಲ್ಲ ಎಂದು ಹೇಳಿ ದಾಖಲೆ ವಾಪಸ್ ನೀಡುತ್ತಿದ್ದಾರೆ. ಬಡವರಿಗೆ ಈ ಪಂಚಾಯತಿಯಲ್ಲಿ ನ್ಯಾಯವೇ ಇಲ್ಲ ಚೆನ್ನಲಕ್ಷ್ಮಯ್ಯ ಆರೋಪಿಸಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

46 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago