ಹಾದ್ರೀಪುರ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ ವಿಚಾರ: ಪಿಡಿಒಗೆ ಶಾಸಕ ಧೀರಜ್ ಮುನಿರಾಜ್ ತರಾಟೆ, ವಾರ್ನಿಂಗ್

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation  ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ

ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.

ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

8 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

24 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

24 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago