ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ
ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.
ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…