ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ
ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.
ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…