ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ
ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.
ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…