ಹಾದ್ರೀಪುರ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ ವಿಚಾರ: ಪಿಡಿಒಗೆ ಶಾಸಕ ಧೀರಜ್ ಮುನಿರಾಜ್ ತರಾಟೆ, ವಾರ್ನಿಂಗ್

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation  ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ

ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.

ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago