ಹಾದ್ರೀಪುರ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ ವಿಚಾರ: ಪಿಡಿಒಗೆ ಶಾಸಕ ಧೀರಜ್ ಮುನಿರಾಜ್ ತರಾಟೆ, ವಾರ್ನಿಂಗ್

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation  ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ

ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.

ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

24 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago