ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಒ ಶಿವಾನಂದ ಮರಕೇರಿಯದ್ದೇ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಕುರಿತು ಮಾಧ್ಯಮಗಳು ಸವಿಸ್ತಾರವಾಗಿ ವರದಿ ಮಾಡಿದ್ದವು. ಜೊತೆಗೆ ಶಾಸಕ ಧೀರಜ್ ಮುನಿರಾಜ್ ಅವರಿಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಹೆಚ್ಚು ದೂರು ಹೊದ ಕಾರಣ ಪಂಚಾಯತಿ ಪಿಡಿಒಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿನ ಪಿಡಿಒ ಇ ಖಾತೆ ಮಾಡಲು 25 ಸಾವಿರಕ್ಕೂ ಹೆಚ್ಚು ಹಣವನ್ನ ಲಂಚ ಪಡೆಯುತ್ತಿದ್ದರು. ಹಣ ಕೊಟ್ಟವರಿಗೆ ಕೆಲಸ, ಇಲ್ಲದಿದ್ದರೆ ವಾಪಸ್ ಆಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಾಗಾಗಿ ಶಾಸಕ ಧೀರಜ್ ಮುನಿರಾಜ್ ಗಮನಕ್ಕೆ ಬಂದ ಕೂಡಲೇ, ಪಿಡಿಒಗೆ ಕರೆ ಮಾಡಿ ಜನರ ಪರ ಕೆಲಸ ಮಾಡಬೇಕು, ಈ ರೀತಿಯ ದೂರುಗಳು ಪದೇ ಪದೇ ಬರುತ್ತಲೇ ಇವೆ. ಹೀಗೆ ಮುಂದುವರೆದರೆ financial misappropriation ಕ್ರಮಕ್ಕೆ ಬರೆದು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಿತಿ ಮೀರಿದ ಇ ಖಾತೆ ಹೆಸರಲ್ಲಿ ಹಗಲು ದರೋಡೆ
ತಾಲೂಕಿನ ಹಾದ್ರೀಪುರ ಪಂಚಾಯತಿಯಲ್ಲಿ ಇ ಖಾತೆ ಅಕ್ರಮ ಜೋರಾಗಿ ಮುಂದುವರೆದಿದೆ. ಹಣ ಇಲ್ಲದೆ ಯಾವುದೇ ದಾಖಲೆಗಳು ಈ ಗ್ರಾಮದಲ್ಲಿ ಆಗಲ್ಲ. ಈ ವಿಚಾರವಾಗಿ ಸಾಕಷ್ಡು ಬಾರಿ ಪಿಡಿಓ ವಿರುದ್ದ ಶಾಸಕರಿಗೆ ದೂರು ನೀಡಿದ್ದೇವೆ ಎಂದು ಚೆನ್ನಲಕ್ಷ್ಮಯ್ಯ ಹೇಳಿದರು.
ಇನ್ನಾದರೂ ಅಧಿಕಾರಿ ಬದಲಾಗಿ ಜನ ಪರ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ….
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…