ಹಾದ್ರೀಪುರ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

 

ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.

ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.

ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

5 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

16 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

16 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

18 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

18 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

21 hours ago