ಹಾದ್ರೀಪುರ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

 

ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.

ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.

ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

7 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

13 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

14 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

16 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

16 hours ago