ಹಾದ್ರೀಪುರ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

 

ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.

ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.

ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

3 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

5 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

16 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

18 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

18 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago