ಹಾದ್ರೀಪುರ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

 

ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.

ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.

ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

30 minutes ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

7 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

17 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

22 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

23 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 day ago