ಹಾದ್ರೀಪುರ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

 

ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.

ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.

ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago