ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.
ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.
ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…