ದೊಡ್ಡಬಳ್ಳಾಪುರ: ಗಣಿತ ಕಲಿಕಾ ಆಂದೋಲನ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆಯನ್ನು ಹಾದ್ರೀಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾದ್ರೀಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಹಾದ್ರೀಪುರ ಪಂಚಾಯತಿ ವ್ಯಾಪ್ತಿಯ ಚಿಕ್ಕಹೆಜ್ಜಾಜ್ಜಿ, ಮಧುರನಹೊಸಹಳ್ಳಿ, ಚುಂಚೇಗೌಡನಹೊಸಹಳ್ಳಿ, ನಾರನಹಳ್ಳಿ, ಕತ್ತಾಳೆಪಾಳ್ಯ, ರಾಮೇಶ್ವರ ಗ್ರಾಮಗಳಿಂದ ಮಕ್ಕಳು ಆಗಮಿಸಿದ್ದರು. ಪರೀಕ್ಷೆಯಲ್ಲಿ ಒಟ್ಟು 80 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
4ನೇ ತರಗತಿ, 5ನೇ ತರಗತಿ ಹಾಗೂ 6ನೇ ತರಗತಿ ಮಕ್ಕಳಿಗೆ ಪ್ರತ್ಯೇಕವಾಗಿ ಗಣಿತ ಕಲಿಕಾ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ನಗದು ರೂಪದಲ್ಲಿ, ಪ್ರಥಮ ಬಹುಮಾನ 1,000/-, ದ್ವಿತೀಯ ಬಹುಮಾನ 750/- ತೃತೀಯ ಬಹುಮಾನ 500/- ರೂಪಾಯಿಗಳನ್ನು ತರಗತಿವಾರು ವಿತರಿಸಲಾಯಿತು.
ಈ ವೇಳೆ ಗ್ರಾಮಪಂಚಾಯತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಉತ್ತಮ ವಿದ್ಯಾಭ್ಯಾಸ ಮಾಡಿ ಗ್ರಾಮಕ್ಕೆ, ದೇಶಕ್ಕೆ ಉತ್ತಮ ಹೆಸರು ತರಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನ ತಂದಿದೆ. ಅವುಗಳನ್ನ ಬಳಕೆ ಮಾಡಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಹಾದ್ರೀಪುರ ಶಾಲೆಯಲ್ಲಿ ವ್ಯಾಸಂಗ ಮಾಡಿ ಓರ್ವ ವಿದ್ಯಾರ್ಥಿ ಯುಪಿಎಸ್ಸಿ ಪಾಸ್ ಆಗಿ ಐಪಿಎಸ್ ಅಧಿಕಾರಿ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ರೀತಿ ಇನ್ನಷ್ಟು ವಿಧ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೆ ಹೋಗಬೇಕು ಎಂದರು.
ಗಣಿತ ಕಲಿಕಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸದಸ್ಯರಾದ ದೇವರಾಜ್ ಸುಷ್ಮಾ, ಎಸ್ ಡಿ ಎಂ ಸಿ ಆಧ್ಯಕ್ಷರು ಹನುಮಂತರಾಜು, ಉಪಾಧ್ಯಕ್ಷ ಚೆನ್ನಕೃಷ್ಣಯ್ಯ, ಮುಖ್ಯ ಶಿಕ್ಷಕರು ಎಪಿ ವಿರೂಪಾಕ್ಷಯ್ಯ, ಮತ್ತು ಸಹ ಶಿಕ್ಷಕರಾದ ನಟರಾಜ್ ವಿ, ಪಂಚಾಯತಿ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾದ್ರೀಪುರ ಗ್ರಾಮಸ್ಥರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…