ಕೋಲಾರ: ರೈತರ ಹಾಗೂ ಗ್ರಾಹಕರ ವಿರೋಧಿಯಾಗಿರುವ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಬೆಂಗಳೂರಿನ ಲಾಲ್ ಬಾಗ್ ಮುತ್ತಿಗೆಗೆ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಪ್ರಗತಿಪರ ರೈತರು ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಿಂದ ತೆರಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ ಸರ್ಕಾರಿ ಸ್ವಾಮ್ಯದ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಮುಂಚುವ ಹಂತಕ್ಕೆ ತಲುಪಿದೆ ಕಳೆದ ಐದು ವರ್ಷಗಳಲ್ಲಿ ಸುಮಾರು 140 ಮಳಿಗೆಗಳನ್ನು ಮುಚ್ಚಲಾಗಿದ್ದು ಇದರಿಂದಾಗಿಯೇ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗಿದೆ ಇದಕ್ಕೆ ಕಾರಣವಾದವರ ವಿರುದ್ದ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮೋರ್ಚಾ ನಗರ ಘಟಕದ ಉಪಾಧ್ಯಕ್ಷ ಕೆ.ಅಮರೇಶ್ ಮಾತನಾಡಿ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದಾಗಿ ಇವತ್ತು ನಿಷ್ಕ್ರಿಯವಾಗಿದೆ ಜೊತೆಗೆ ದಲ್ಲಾಳಿಗಳ ಕೂಪವಾಗಿದೆ ಸಂಸ್ಥೆಯನ್ನು ಕೂಡಲೇ ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ನಾರಾಯಣಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ವೇಣುಗೋಪಾಲ್, ಸತೀಶ್ ರೆಡ್ಡಿ, ನಾರಾಯಣಸ್ವಾಮಿ, ವಿಜಯ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಶ್ರೀರಾಮಪ್ಪ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯದರ್ಶಿ ಶ್ರೀಧರ್, ಕೆಜಿಎಫ್ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ರೆಡ್ಡಿ, ಮುಖಂಡರಾದ ಓಹಿಲೇಶ್, ಪವನ್ ಚಂದ್ರಶೇಖರ್ ಗೌಡ ಹಾಗೂ ಪ್ರಗತಿಪರ ರೈತ ಮುಂತಾದವರು ಇದ್ದರು.
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…