Categories: ಕೋಲಾರ

ಹಾಪ್ ಕಾಮ್ಸ್ ನಲ್ಲಿ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಲಾಲ್ ಬಾಗ್ ಮುತ್ತಿಗೆಗೆ ಹೊರಟ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು

ಕೋಲಾರ: ರೈತರ ಹಾಗೂ ಗ್ರಾಹಕರ ವಿರೋಧಿಯಾಗಿರುವ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಬೆಂಗಳೂರಿನ ಲಾಲ್ ಬಾಗ್ ಮುತ್ತಿಗೆಗೆ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಪ್ರಗತಿಪರ ರೈತರು ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಿಂದ ತೆರಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ ಸರ್ಕಾರಿ ಸ್ವಾಮ್ಯದ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಮುಂಚುವ ಹಂತಕ್ಕೆ ತಲುಪಿದೆ ಕಳೆದ ಐದು ವರ್ಷಗಳಲ್ಲಿ ಸುಮಾರು 140 ಮಳಿಗೆಗಳನ್ನು ಮುಚ್ಚಲಾಗಿದ್ದು ಇದರಿಂದಾಗಿಯೇ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗಿದೆ ಇದಕ್ಕೆ ಕಾರಣವಾದವರ ವಿರುದ್ದ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ನಗರ ಘಟಕದ ಉಪಾಧ್ಯಕ್ಷ ಕೆ.ಅಮರೇಶ್ ಮಾತನಾಡಿ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದಾಗಿ ಇವತ್ತು ನಿಷ್ಕ್ರಿಯವಾಗಿದೆ ಜೊತೆಗೆ ದಲ್ಲಾಳಿಗಳ ಕೂಪವಾಗಿದೆ ಸಂಸ್ಥೆಯನ್ನು ಕೂಡಲೇ ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ನಾರಾಯಣಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ವೇಣುಗೋಪಾಲ್, ಸತೀಶ್ ರೆಡ್ಡಿ, ನಾರಾಯಣಸ್ವಾಮಿ, ವಿಜಯ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಶ್ರೀರಾಮಪ್ಪ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯದರ್ಶಿ ಶ್ರೀಧರ್, ಕೆಜಿಎಫ್ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ರೆಡ್ಡಿ, ಮುಖಂಡರಾದ ಓಹಿಲೇಶ್, ಪವನ್ ಚಂದ್ರಶೇಖರ್ ಗೌಡ ಹಾಗೂ ಪ್ರಗತಿಪರ ರೈತ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

24 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago